Published On: Tue, Dec 12th, 2017

ಸಿದ್ಧಕಟ್ಟೆ: ಗುಣಶ್ರೀ ವಿದ್ಯಾಲಯ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬಂಟ್ವಾಳ:ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯ ಇಲ್ಲಿನ ವಿದ್ಯಾರ್ಥಿನಿ ರಮ್ಯಶ್ರೀ ಜೈನ್ ಇವರು ಬೆಂಗಳೂರಿನಲ್ಲಿ ಸೋಮವಾರ ನಡೆದ 14ರ ವಯೋಮಾನ ವಿಭಾಗದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಚಕ್ರ ಎಸೆತ ಪ್ರಥಮ ಮತ್ತು ಗುಂಡೆಸೆತ ದ್ವಿತೀಯ ಸ್ಥಾನ ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

11btl-Gunashriಈಕೆ ಸಂಗಬೆಟ್ಟು ಸಮೀಪದ ಮಾಲ್ದಾಡು ನಿವಾಸಿ ಪ್ರಗತಿಪರ ಕೃಷಿಕ ರವೀಂದ್ರ ಜೈನ್ ಮತ್ತು ಪದ್ಮಶ್ರೀ ಜೈನ್ ಇವರ ಪುತ್ರಿಯಾಗಿದ್ದು, ಶಾಲೆ ಮಾತ್ರವಲ್ಲದೆ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಚಕ್ರ ಎಸೆತದಲ್ಲಿ ಈ ಹಿಂದಿನ ಎಲ್ಲಾ ದಾಖಲೆ ಮುರಿದಿರುವ ಈಕೆ ಇದೇ ತಿಂಗಳ ಕೊನೆಯಲ್ಲಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯಶಿಕ್ಷಕಿ ಸಬಿತಾ ಲವಿನಾ ಪಿಂಟೊ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter