Published On: Thu, Feb 13th, 2020

ಅಕ್ರಮ ಮರಳುಗಾರಿಕೆಗೆ ದಾಳಿ : ಬೋಟ್,ಲಾರಿ,ಹಿಟಾಚಿ ವಶ

ಬಂಟ್ವಾಳ,   ಇಲ್ಲಿನ ಕರಿಯಂಗಳ. ಪಲ್ಗುಣಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ       ಮರಳುಗಾರಿಕೆಗೆ ಬುಧವಾರ ಕಂದಾಯ, ಗಣಿ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಬೋಟ್, ಲಾರಿ ಹಾಗೂ ಹಿಟಾಚಿಯನ್ನು ತಾತ್ಕಾಲಿಕ ನೆಲೆಯಲ್ಲಿ ವಶಪಡಿಸಿಕೊಂಡಿದೆ.ಮರಳುಗಾರಿಕೆ ನಡೆಸುವ ಕುರಿತು ವ್ಯಕ್ತಿಯೊಬ್ಬರಿಗೆ ಬಡಗಬೆಳ್ಳೂರಿನಲ್ಲಿ ಟೆಂಡರ್ ಆಗಿದ್ದು, ಆದರೆ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳ ಕರಿಯಂಗಳವಾಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು. ರಸ್ತೆಯ ತೊಂದರೆಯ ಹಿನ್ನೆಲೆಯಲ್ಲಿ ಗಣಿ ಇಲಾಖೆಯ ಅನುಮತಿ ಪಡೆದೇ ಅಧಿಕೃತ ಸ್ಥಳದಿಂದ ತಂದು ಇಲ್ಲಿ ಲೋಡ್ ಮಾಡಲಾಗುತ್ತಿದೆ ಎಂದು ಮರಳುಗಾರಿಕೆ ನಡೆಸುತ್ತಿದ್ದವರು ತಿಳಿಸಿದ್ದು, ಹೀಗಾಗಿ ಸೊತ್ತುಗಳನ್ನು ತಾತ್ಕಾಲಿಕ ನೆಲೆಯಲ್ಲಿ ವಶಪಡಿಸಿಕೊಳ್ಳಲಾಗಿದೆ.  ದಾಳಿಯ ವೇಳೆ ಅಲ್ಲಿದ್ದ ಕಾರ್ಮಿಕರು ಪರಾರಿಯಾಗಿದ್ದಾರೆ, ಸ್ಥಳದಲ್ಲಿದ್ದ   ೧೧ ಬೋಟ್‌ಗಳು, ೬ ಲಾರಿಗಳು ಹಾಗೂ ಒಂದು ಹಿಟಾಚಿ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಸ್ತುತ ಸೊತ್ತುಗಳನ್ನು ತಾತ್ಕಾಲಿಕ ನೆಲೆಯಲ್ಲಿ ವಶಪಡಿಸಿಕೊಂಡಿದ್ದು, ಗಣಿ ಇಲಾಖೆಯವರು ಪರಿಶೀಲಿಸಿ ಕ್ರಮಕೈಗೊಳ್ಳಲಿದ್ದಾರೆ ಎಂದು ತಹಶೀಲ್ದಾರ್ ರಶ್ಮಿ ಅವರು ತಿಳಿಸಿದ್ದಾರೆ.

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter