ಕಕ್ಯಪದವು ಎಲ್.ಸಿ.ಆರ್.ಇಂಡಿಯನ್ ಪ.ಪೂ.ಕಾಲೇಜು NSS, ವಿದ್ಯಾರ್ಥಿ ಸಂಘ ಉದ್ಘಾಟನೆ
ಬಂಟ್ವಾಳ: ಬಂಟ್ವಾಳ ತಾಲೂಕು ಉಳಿ, ಕಕ್ಯಪದವು ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ಕಾಲೇಜಿನ 2018-19ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಹಾಗೂ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜರಗಿತು.
ಸಿದ್ಧಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜು ರಾಜ್ಯಶಾಸ್ತ್ರ ಉಪನ್ಯಾಸಕ ಶೀನಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವವನ್ನು ಹಲವಾರು ನಿದರ್ಶನಗಳ ಮೂಲಕ ತಿಳಿಯಪಡಿಸಿ, ವ್ಯಕ್ತಿಗಿಂತ ವ್ಯಕ್ತಿತ್ವ ಮುಖ್ಯವೆಂದು ಹೇಳಿದರು.
ಸಂಸ್ಥೆಯ ಪ್ರಾಂಶುಪಾಲ ಪ್ರವೀಣ್ ಎ. ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಕಾರ್ಯವನ್ನು ಎನ್ನೆಸ್ಸೆಸ್ ಮಾಡುತ್ತದೆ ಎಂದರು. ಬಳಿಕ ವಿದ್ಯಾರ್ಥಿ ಸಂಘದ ಪ್ರತಿಜ್ಞಾ ವಿಧಿ ಬೋಧಿಸಿದರು.
ಉಳಿಬÉೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಅಕ್ಬರ್ ಆಲಿ, ಘಟಕದ ಯೋಜನಾ„ಕಾರಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಿವರಾಜ್ ಗಟ್ಟಿ, ಕಲಾ ವಿಭಾಗದ ಮುಖ್ಯಸ್ಥೆ ವಿಂದ್ಯಾಶ್ರೀ, ಸಹ ಯೋಜನಾ„ಕಾರಿ ಜಯಶ್ರೀ, ಘಟಕದ ನಾಯಕ ಆದರ್ಶ್, ವಿದ್ಯಾರ್ಥಿ ಸಂಘದ ನಾಯಕ ನಿಶಾಲ್ ಲೋಬೊ, ನಾಯಕಿ ಧನ್ಯಶ್ರೀ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶೈಕ್ಷಣಿಕ ವರ್ಷದ ಅತ್ಯುನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.
ಎನ್ನೆಸ್ಸೆಸ್ ಯೋಜನಾಧಿಕಾರಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಿವರಾಜ್ ಗಟ್ಟಿ ಪ್ರಸ್ತಾವಿಸಿದರು. ಘಟಕದ ನಾಯಕ ಆದರ್ಶ್ ಸ್ವಾಗತಿಸಿ, ಧನ್ಯಶ್ರೀ ವಂದಿಸಿದರು. ಭಾಗ್ಯಲಕ್ಷ್ಮೀ ಹಾಗೂ ತಸ್ಲೀಮಾ ಕಾರ್ಯಕ್ರಮ ನಿರೂಪಿಸಿದರು.