ಪಟ್ಲ ಯಕ್ಷಾಶ್ರಯದ ತೃತೀಯ ಮನೆಯ ಗೃಹಪ್ರವೇಶ
ಮಂಗಳೂರು: ಕುಂಜತ್ತಬೈಲ್ನಲ್ಲಿ ಯಕ್ಷಗಾನ ಕಲಾವಿದ ಪುರಂದರ ಇವರಿಗೆ ಪಟ್ಲ ಯಕ್ಷಾಶ್ರಯ ಯೋಜನೆಯಡಿ ಮನೆಯನ್ನು ನಿರ್ಮಿಸಿ ಕೊಡಲಾಗುವುದು ಹಾಗೂ ಗೃಹಪ್ರವೇಶದ ಬಗ್ಗೆ ಕುಂಜತ್ತಬೈಲ್ ಅಯ್ಯಪ್ಪ ಮಂದಿರದ ಆವರಣದಲ್ಲಿ ಸ್ಥಳೀಯರ ಸಮ್ಮುಖದಲ್ಲಿ ಸಭೆ ಸೇರಿ ಸಿದ್ಧತೆಗಳ ಬಗ್ಗೆ ನಿರ್ಧರಿಸಲಾಯಿತು.
ಡಿ.10 ಸೋಮವಾರದಂದು ಬೆಳಿಗ್ಗೆ ಶ್ರೀ ದೇವಿ ನಿಲಯ, ಪಟ್ಲ ಯಕ್ಷಾಶ್ರಯ-3 ಇದರ ಗೃಹಪ್ರವೇಶ ನೆರವೇರಲಿದೆ ಇದು ಯಕ್ಷಧ್ರುವ ಪಟ್ಲ ಫೌಂಡೇಶನ್ನಿಂದ ನಿರ್ಮಿಸಿಕೊಡುತ್ತಿರುವ ಮೂರನೇ ಮನೆಯಾಗಿದೆ. ಸಮಾರಂಭದಲ್ಲಿ ಪಟ್ಲ ಫೌಂಡೇಶನ್ ಘಟಕದ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಸಹಿತ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ನ ಪ್ರಕಟನೆ ತಿಳಿಸಿದ್ದಾರೆ.