ಓಂಶ್ರೀ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಕ್ರೀಡಾಕೂಟ.
ಕಾಂತಾವರ :ಸ.ಕಿ.ಪ್ರಾ ಶಾಲೆ ಮದಕ ಇದರ ಓಂಶ್ರೀ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಮಕ್ಕಳ ದಿನಾಚರಣೆಯ ಅಂಗವಾಗಿ ನಡೆದ ಕ್ರೀಡಾಕೂಟವನ್ನು ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ’ಸೋಜಾ ದೀಪಪ್ರಜ್ವಲಿಸಿ ಉದ್ಘಾಟಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷ ಜಗದೀಶ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟು ನವೀನ್ ದೇವಾಡಿಗ,ಬಿಜೆಪಿ ಯುವ ಮೋರ್ಚಾ ಮೀಯ್ಯಾರು ಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ನವೀನ್ ಸಾಲ್ಯಾನ್ , ಸುಧಾಕರ್ ಸಾಲ್ಯಾನ್ ಮದಕ, ಅಂಗನವಾಡಿ ಕಾರ್ಯಕರ್ತೆ ಸುಜಾತ ಕೋಟ್ಯಾನ್ , ಓಂಶ್ರೀ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು.
ಸುಕೇಶ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಊರ ನಾಗರೀಕರು, ಹಳೆವಿದ್ಯಾರ್ಥಿ ಸಂಘ , ಸ್ತೀಶಕ್ತಿ ಸಂಘ, ಹಾಗೂ ಪೋಷಕರು , ಹಳೆವಿದ್ಯಾರ್ಥಿ ಸಂಘದ ಸದಸ್ಯರು ಭಾಗವಹಿಸುದರೊಂದಿಗೆ ಕಾರ್ಯಕ್ರಮ ಯಶಸ್ವಿಯಾಯಿತು.