ಹೆನ್ನೂರುಪದವು: ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ
ಸಿದ್ಧಕಟ್ಟೆ: ಕಲ್ಕೂರಿಪದವು ಕೇಸರಿ ಫ್ರೆಂಡ್ಸ್ ಇದರ ಆಶ್ರಯದಲ್ಲಿ ಹೆನ್ನೂರುಪದವು ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಸೋಮವಾರ ನಡೆಯಿತು. ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ, ಸಂಗಬೆಟ್ಟು ಗ್ರಾ.ಪಂ. ಉಪಾಧ್ಯಕ್ಷ ಸತೀಶ್ ಪೂಜಾರಿ, ಸಿದ್ಧಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಕೆ. ರತ್ನಕುಮಾರ್ ಚೌಟ, ಶಾಲಾಭಿವೃದ್ಧಿ ಸಂಘದ ಅಧ್ಯಕ್ಷ ರಘು ಪೂಜಾರಿ, ಶಾಲಾ ಮುಖ್ಯ ಶಿಕ್ಷಕಿ ಲಿನೈಟ್ ಡಿಸೋಜ, ಕಲ್ಕೂರಿಪದವು ಕೇಸರಿ ಫ್ರೆಂಡ್ಸ್ನ ಅಧ್ಯಕ್ಷ ರತ್ನಾಕರ, ಕಾರ್ಯದರ್ಶಿ ಪ್ರಶಾಂತ್ ಉಪಸ್ಥಿತರಿದ್ದರು.