Published On: Wed, Feb 21st, 2018

ಶತಮಾನದ ದೇವಾಲಯಕ್ಕೆ ಲಾರಿ ಢಿಕ್ಕಿ: ತಪ್ಪಿದ ಭಾರೀ ಅನಾಹುತ

IMG-20180221-WA0021-701x526

ಧಾರವಾಡ:  ಚಲಿಸುತ್ತಿದ್ದ ಲಾರಿಯ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಶತಮಾನದ ಇತಿಹಾಸವಿದ್ದ ದೇವಸ್ಥಾನಕ್ಕೆ ಢಿಕ್ಕಿ ಹೊಡೆದ ಘಟನೆ  ಜಿಲ್ಲೆಯ ಗುಳೇದಕೊಪ್ಪ ಗ್ರಾಮದಲ್ಲಿ  ಬುಧವಾರ ಬೆಳಗ್ಗೆ  ನಡೆದಿದೆ.

ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರ ಮೇಲೆ ಬೆಳಗಾವಿಯಿಂದ ಧಾರವಾಡಕ್ಕೆ ತೆರಳುತ್ತಿದ್ದ ಲಾರಿಯ ಟೈರ್ ಸ್ಫೋಟಗೊಂಡ  ಪರಿಣಾಮ ಚಾಲಕನ ನಿಯಂತ್ರಣ  ಸುಮಾರು ಮೂರು ಶತಮಾನಗಳ ಇತಿಹಾಸ ಹೊಂದಿರುವ ಇಲ್ಲಿನ ಈಶ್ವರ ದೇವಸ್ಥಾನಕ್ಕೆ ಹಿಂದಿನಿಂದ ಗುದ್ದಿದ್ದು ದೇವಸ್ಥಾನದ ಪಕ್ಕದಲ್ಲಿಯೇ ಮನೆಗಳಿದ್ದು ಭಾರೀ ಅನಾಹುತ ಒಂದು ತಪ್ಪಿದೆ. ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter