ಮಾಜಿ ಬಿಜೆಪಿ ಶಾಸಕ ಡಾ.ವೈ.ಸಿ ವಿಶ್ವನಾಥ್ ನಿಧನ
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಚಿಕ್ಕಮಗಳೂರು ಜಿಲ್ಲೆ ಕಡೂರು ಕ್ಷೇತ್ರದ ಮಾಜಿ ಶಾಸಕ ಡಾ.ವೈ.ಸಿ.ವಿಶ್ವನಾಥ್ (68) ಅವರು ಚಿಕಿತ್ಸೆ ಫಲಕಾರಿಯಾಗದೆ ರವಿವಾರ ನಿಧನರಾಗಿದ್ದಾರೆ.
ಮೃತರು ಪುತ್ರರಾದ ಪ್ರದೀಪ್, ಪವನ್ ಹಾಗೂ ದಿವ್ಯಾ ಹಾಗೂ ಅಪಾರ ಸಂಖ್ಯೆಯ ಬಂಧು ಮಿತ್ರರನ್ನು ಅಗಲಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬೆಳ್ಳಿಪ್ರಕಾಶ್ ಪರವಾಗಿ ಸಕ್ರಿಯ ಪ್ರಚಾರ ನಡೆಸಿದ್ದರು. ಆದರೆ ವಿಧಾನಸಭಾ ಚುನಾವಣಾ ಫಲಿತಾಂಶದ ಮಾರನೆ ದಿನ ವಿಶ್ವನಾಥ್ ಅಸ್ವಸ್ಥರಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ವಿಶ್ವನಾಥ್ ರವಿವಾರ ಕೊನೆಯುಸಿರೆಳೆದಿದ್ದಾರೆಂದು ವೈದ್ಯಕೀಯ ಮೂಲಗಳು ತಿಳಿಸಿವೆ.