Published On: Sat, Sep 26th, 2020

ಶ್ರೀಮತಿ ಧನಲಕ್ಷ್ಮಿಗೆ ಡಾಕ್ಟರೇಟ್ ಪದವಿ

ಮಂಗಳೂರು:  ಶ್ರೀಮತಿ ಧನಲಕ್ಷ್ಮಿ ಅವರು ಮಂಡಿಸಿದ ಪ್ರೌಢಪ್ರಬಂಧ “ವಿವಿಧ ಹಂತದ ಸ್ವಾಭಿಮಾನ ಹೊಂದಿರುವ ಪ್ರೌಢಶಾಲಾ ವಿದ್ಯಾರ್ಥಿಗಳ ಜೀವನ ಕೌಶಲಗಳು,ಆಧ್ಯಾತ್ಮಿಕ ಬುದ್ಧಿವಂತಿಕೆ ಹಾಗೂ ಶೈಕ್ಷಣಿಕ ಸಾಧನೆಗಳ ಮೇಲೆ ಜೀವನ ಕೌಶಲ್ಯಗಳನ್ನು ಕಲಿಸುವ ವಿಭಿನ್ನ ವಿಧಾನಗಳ ಪರಿಣಾಮಕಾರಿತ್ವ” ಈ ವಿಷಯಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿಯನ್ನು  ನೀಡಿದೆ.IMG-20200926-WA0066

ಇವರಿಗೆ ಮಂಗಳೂರಿನ ಸೇಂಟ್ ಆನ್ಸ್ ಶಿಕ್ಷಣ ಮಹಾವಿದ್ಯಾಲಯದ ಸಹ  ಪ್ರಾಧ್ಯಾಪಕಿ ಡಾ. ವಿಜಯಕುಮಾರಿ ಎಸ್.ಎನ್  ಮಾರ್ಗದರ್ಶಕರಾಗಿದ್ದರು. ಧನಲಕ್ಷ್ಮಿಯವರು ಮಂಗಳೂರಿನ ಸೇಂಟ್ ಆನ್ಸ ಶಿಕ್ಷಣ ಮಹಾವಿದ್ಯಾಲಯ, ಸರ್ಕಾರಿ ಶಿಕ್ಷಕ -ಶಿಕ್ಷಣ ವಿದ್ಯಾಲಯ ಹಾಗೂ ಬಂಟ್ವಾಳದ ಎಸ್.ವಿ.ಎಸ್ ಪ್ರಾಥಮಿಕ,ಪ್ರೌಢ ಹಾಗೂ ಪದವಿ ಕಾಲೇಜಿನ ಹಳೆವಿದ್ಯಾರ್ಥಿ ಆಗಿದ್ದಾರೆ. ಪ್ರಸ್ತುತ ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter