ಬೆಂಗಳೂರು: ಆ.30ರಿಂದ ನಂದಿನಿ ಹಾಲಿನ ಸರಬರಾಜನ್ನು ಸ್ಥಗಿತಗೊಳಿಸಲು ನಂದಿನಿ ಹಾಲು ಮಾರಾಟಗಾರರು ನಿರ್ಧರಿಸಿದ್ದಾರೆ.

ಸ್ಥಗಿತ ಯಾಕೆ?
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಈ ಹಿಂದೆ ಹಲವು ಬಾರಿ ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳಿಗೆ ಮನವಿ ಸಲ್ಲಿಸಿದ್ದರು. ಆದರೆ ಮಂಡಳಿ ಅವರ ಮನವಿಗೆ ಕಿಮ್ಮತ್ತು ನೀಡಿಲ್ಲ ಎಂಬುದು ಹಾಲು ಮಾರಾಟಗಾರರ ಆರೋಪ.
ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿ ನಂದಿನಿ ಹಾಲು ಮಾರಾಟಗಾರರು ಬೆಂಗಳೂರಿನ ಕೆಎಂಎಫ್ ಕಚೇರಿ ಮುಂದೆ ಶನಿವಾರ ಮಧ್ಯಾಹ್ನ ಮೂರು ಗಂಟೆಯಿಂದ ಪ್ರತಿಭಟನೆ ನಡೆಸಲಿದ್ದಾರೆ
