ಬೆಂಗಳೂರು : ನಟ ದುನಿಯಾ ವಿಜಯ್ ಅವರನ್ನು ತಮಿಳುನಾಡಿನಲ್ಲಿ ಚನ್ನಮ್ಮ ಕೆರೆ ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಪಿ. ಗೌಡರ ಬಂಧನಕ್ಕೆ ತೆರಳಿದ ವೇಳೆಯಲ್ಲಿ,ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನಲೆಯಲ್ಲಿ ಹಾಗೂ ಸುಂದರಗೌಡ ಪರಾರಿಯಾಗಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದುನಿಯಾ ವಿಜಯ್ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.
ಇದೇ ವೇಳೆ ಪೊಲಿಸರ ಬಂಧನದ ಹಿನ್ನಲೆಯಲ್ಲಿ ಕಳೆದ 10 ದಿನಗಳಿಂದ ದುನಿಯಾ ವಿಜಯ್ ತಲೆಮರೆಸಿಕೊಂಡು ಓಡಾಡುತ್ತಿದ್ದರು.
ಇಂದು ತಮಿಳುನಾಡಿನಲ್ಲಿ ಚೆನ್ನಮ್ಮ ಕೆರೆ ಅಚ್ಚುಕಟ್ಟು ಠಾಣಾ ಪೊಲೀಸರು ದುನಿಯಾ ವಿಜಯ್ ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

