ದ ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾಗಿರಿ ಪಡಿಬಾಗಿಲು, ಇಲ್ಲಿ ಉದಯಗಿರಿ, ಕುದ್ದುಪದವು ಮತ್ತು ಅಜ್ಜಿನಡ್ಕ ಕ್ಲಸ್ಟರ್ ಮಟ್ಟದ `ಪ್ರತಿಭಾ ಕಾರಂಜಿ 2018-19′ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಮುಖ್ಯ ಅತಿಥಿಯಾಗಿ ಭಾಗವಹಿಸಿ `ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಪೂರಕವಾಗಿರುತ್ತದೆ’ ಎಂದರು.
ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ ಆಳ್ವ ಸಭಾಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಸಕರನ್ನು ಶಾಲಾ ವತಿಯಿಂದ ಗೌರವಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್, ಮುಖ್ಯ ಶಿಕ್ಷಕಿ ಶಶಿಕಲಾ, ಎಸ್ ಡಿ ಎಂ ಸಿ ಅಧ್ಯಕ್ಷ ಬಾಲಕೃಷ್ಣ ಕಾರಂತ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಶಾಲಾಬೀವೃದ್ಧಿ ಸಮಿತಿ ಸದಸ್ಯ ಲಿಂಗಪ್ಪ ಗೌಡ ಸ್ವಾಗತಿಸಿದರು. ಶ್ರೀಕಲಾ ವಂದಿಸಿದರು. ಶಿಕ್ಷಕಿ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು, ಸಹಶಿಕ್ಷಕರು ಸಹಕರಿಸಿದರು.
