ಮೂಡುಬಿದಿರೆ: ಇಲ್ಲಿನ ತೋಡಾರ್ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯ ಎನ್ನೆಸ್ಸೆಸ್ ಘಟಕದ ವತಿಯಿಂದ ವಿದ್ಯಾಲಯದ ಆವರಣದಲ್ಲಿ ತರಹೇವಾರಿ ಗಿಡಗಳನ್ನು ನೆಡುವ ಮೂಲಕ ಆ.4 ಶನಿವಾರ ವನಮಹೋತ್ಸವವನ್ನು ಆಚರಿಸಿದರು.

yenepoya 1
ವನಮಹೋತ್ಸವ ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ವಹಿಸಿದ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ.ಜೀವನ್ ಪಿಂಟೋ ವನಮಹೋತ್ಸವದ ಪ್ರಾಮುಖ್ಯತೆಯನ್ನು ವಿವರಿಸುತ್ತಾ “ಹಸಿರು ನಾಡಿನ ಉಸಿರು. ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಮನೆಯ ಸುತ್ತಮುತ್ತ ಗಿಡಗಳನ್ನು ನೆಟ್ಟು ಸ್ವಚ್ಛ ಮತ್ತು ಸಮೃದ್ಧ ಪರಿಸರದ ರಕ್ಷಣೆ ಮಾಡಬೇಕು” ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *