ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಇದರ ವತಿಯಿಂದ ಧಾರ್ಮಿಕ ಕ್ಷೇತ್ರಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಂಗಣವನ್ನು ಸ್ವಚ್ಛಗೊಳಿಸಲಾಯಿತು. ದೇವಸ್ಥಾನದ ಕೃಷ್ಣಯ್ಯ ಕೆ ಹಾಗೂ ಜಯರಾಮ ಬಳ್ಳಾಲ್ ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕಿ ಪ್ರೇಮ, ಸೇವಾ ಪ್ರತಿನಿಧಿಗಳಾದ ಹೇಮಲತಾ, ಕೌಶಿತಾ ಮತ್ತು ಸರಿತಾ, ವಿಟ್ಲ ವಲಯ ಅಧ್ಯಕ್ಷ ಜನಾರ್ಧನ ಪದ್ಮಶಾಲಿ, ವಿಟ್ಲ ಬಿ ಒಕ್ಕೂಟದ ಅಧ್ಯಕ್ಷ ರಾಜೇಶ್, ಉಕ್ಕುಡ ಒಕ್ಕೂಟದ ಅಧ್ಯಕ್ಷ ಜಗನ್ನಾಥ, ಒಕ್ಕೆತ್ತೂರು ಒಕ್ಕೂಟದ ಅಧ್ಯಕ್ಷ ಜಯ ಸಿ ಹೆಚ್, ಒಕ್ಕೂಟಗಳ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.
