ಮೂಡುಬಿದಿರೆ: ಇಲ್ಲಿನ ಶ್ರೀ ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಮೂಡುಬಿದಿರೆ ಇದರ 4 ನೇ ವಾರ್ಷಿಕ ಮಹಾಸಭೆಯು ಸಮಾಜ ಮಂದಿರದಲ್ಲಿ ರವಿವಾರ ಜರುಗಿತು.
ಸಹಕಾರಿಯ ಅಧ್ಯಕ್ಷ ಸುರೇಶ್ ಪೂಜಾರಿ ಎಂ.ಅವರ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಹಕಾರಿ ನಡೆದು ಬಂದ ದಾರಿ ಹಾಗೂ ವರದಿ ವರ್ಷಕ್ಕೆ 10% ಡಿವಿಡೆಂಟ್ ಘೋಷಿಸಿದರು.
ನಿರ್ದೇಶಕ ರಂಜಿತ್ ಪೂಜಾರಿ 2016-17 ನೇ ಸಾಲಿನ ಮಹಾಸಭೆಯ ನಡವಳಿಕೆಗಳನ್ನು ಪ್ರಸ್ತುತ ಪಡಿಸಿ ದಾಖಲಿಸಿದರು.

Panchashakthi
ಸಹಕಾರಿಯ ಕಾರ್ಯನಿರ್ವಹಣಾಧಿಕಾರಿ ರಾಜಶೇಖರ ಮಧ್ಯಸ್ಥ 2017-18 ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು. ಪ್ರತಿಭಾ ಬಜೆಟ್‍ಗಿಂತ ಜಾಸ್ತಿ ಖರ್ಚಾದ ಐವೇಜಿಗೆ ಮಂಜೂರಾತಿಯನ್ನು ಪಡೆದುಕೊಂಡರು. ನಿರ್ದೇಶಕ ರತ್ನಾಕರ ಪೂಜಾರಿ 2017-18 ನೇ ಸಾಲಿನ ಬಜೆಟ್ ಮಂಡಿಸಿದರು.
ಮೂಡುಬಿದಿರೆಯ ಸ್ಫೂರ್ತಿ ಭಿನ್ನ ಸಾಮಥ್ರ್ಯ ಶಾಲೆಗೆ ಸಹಕಾರಿ ವತಿಯಿಂದ ಧನ ಸಹಾಯ ನೀಡಲಾಯಿತು. 4 ಸ್ವಸಹಯ ಸಂಘದ ಸದಸ್ಯರ ಮಕ್ಕಳಿಗೆ ಎಸ್.ಎಸ್.ಎಲ್.ಸಿ.ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.
ಸಹಕಾರಿಯ ನಿರ್ದೇಶಕ ರಮೇಶ್ ಎಸ್.ಶೆಟ್ಟಿ ಸ್ವಾಗತಿಸಿದರು. ಉಪಾಧ್ಯಕ್ಷ ಗೋಪಾಲ ಶೆಟ್ಟಿಗಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅನಿತಾ ಪಿ.ಬಲ್ಲಾಳ್ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕಿ ಉಷಾ ವಂದಿಸಿದರು.

By suddi9

Leave a Reply

Your email address will not be published. Required fields are marked *