ಬಂಟ್ವಾಳ: ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ಹುಡುಗರ ಕಬ್ಬಡಿ ತಂಡವು ಬಂಟ್ವಾಳ ತಾಲೂಕಿನ ಕಕ್ಯಪದವು ‘ಬ್ರಹ್ಮಶ್ರೀ ನಾರಾಯಣ ಗುರು ಯುವ ಫ್ರೆಂಡ್ಸ್’ ಪ್ರಾಯೋಜಕತ್ವದಲ್ಲಿ ಅ.21ರಂದು ನಡೆದ ಪಿಯುಸಿ ವಿಭಾಗದ ವಿದ್ಯಾರ್ಥಿಗಳಿಗೆ ಮುಕ್ತ ಕಬ್ಬಡಿ ಪಂದ್ಯಾಟದಲ್ಲಿ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.
ಪಂದ್ಯಾಟದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸುಹಾನ್ ಕುಮಾರ್ ‘ಬೆಸ್ಟ್ ಡಿಫೆಂಡರ್’ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಾಗರ್ ‘ಅಲ್ರೌಂಡರ್’ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಸಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

