ವಿಟ್ಲ :ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು,ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣ, ಮುಕ್ತ ಗಂಗೋತ್ರ ಮೈಸೂರು ಇಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದ ಗಝಲ್ ಸ್ಪರ್ಧೆಯಲ್ಲಿ 34 ಶೈಕ್ಷಣಿಕ ಜಿಲ್ಲೆಯ ಸ್ಪರ್ಧಿಗಳೊಂದಿಗೆ ಭಾಗವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲದ 8ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಕುಮಾರಿ ಶ್ರೀವಿದ್ಯಾ ಪಾದೆಕಲ್ಲು ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಈಕೆ ಕರೋಪಾಡಿ ಗ್ರಾಮದ ಪಾದೆಕಲ್ಲು ಕುಮಾರ ಸುಬ್ರಹ್ಮಣ್ಯ ಪಿ.ಎನ್ ಹಾಗೂ ದಿವ್ಯ ಕೆ ಎಸ್ಇವರ ಸುಪುತ್ರಿ.


