ಬಂಟ್ವಾಳ: ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರ ಸಂಘ ಪುಂಜಾಲಕಟ್ಟೆ ಇದರ ಆಡಳಿತ ಮಂಡಳಿಯ ಮುಂದಿನ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಕೆ.ಲಕ್ಷ್ಮೀ ನಾರಾಯಣ ಉಡುಪ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಪೂಜಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶುಕ್ರವಾರ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಕೆ. ಲಕ್ಷ್ಮಿ ನಾರಾಯಣ ಉಡುಪ ಅವರು ದ.ಕ. ಮತ್ತು ಉಡುಪಿ ಜಿಲ್ಲಾ ಹಾಪ್ಕಾಮ್ಸ್ ನ ಹಾಲಿ ಅಧ್ಯಕ್ಷರು ಆಗಿದ್ದಾರೆ. ಅವರು ಪಿಲಾತಬೆಟ್ಟು ವ್ಯ. ಸೇ. ಸ. ಸಂಘದಲ್ಲಿ ಈ ಹಿಂದೆ ಎರಡು ಅವಧಿಗೆ ಅಧ್ಯಕ್ಷರಾಗಿದ್ದು, ಸಂಘದ ಅಭಿವೃದ್ದಿಗೆ ಶ್ರಮಿ ಸಿದ್ದರು.
ನಿರ್ದೇಶಕರಾದ ಬೂಬ ಸಪಲ್ಯ, ಸೀತಾರಾಮ ಶೆಟ್ಟಿ, ಚಂದ್ರಶೇಖರ ಹೆಗ್ಡೆ, ನಾರಾಯಣ ಪೂಜಾರಿ, ಸಂತೋಷ್ ಕುಮಾರ್ ಶೆಟ್ಟಿ, ಪ್ರಭಾಕರ ಪಿ. ಎಂ., ಹರ್ಷಿಣಿ ಪುಷ್ಪಾನಂದ, ಸರೋಜಾ ಡಿ. ಶೆಟ್ಟಿ, ಶಿವಯ್ಯ , ಸುಂದರ ನಾಯ್ಕ, ದಿನೇಶ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜಪ್ಪ ಮೂಲ್ಯ ಮತ್ತು ಸಿಬಂದಿ ವರ್ಗ ಉಪಸ್ಥಿತರಿದ್ದರು.
ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿಯ ಅಧಿಕಾರಿ ಎನ್. ಜೆ. ಗೋಪಾಲ್ ಅವರು ಆಯ್ಕೆ ಪ್ರಕ್ರಿಯೆ ನಡೆಸಿದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಲಾಯಿತು.
