ವಿಟ್ಲ ಮೇಗಿನಪೇಟೆ ಶ್ರೀ ಮಹಮ್ಮಾಯಿ ದೈವಸ್ಥಾನವು ಜೀರ್ಣೋದ್ಧಾರ ನಡೆಯುತ್ತಿದ್ದು ಇದರ ಪಾದುಕಾನ್ಯಾಸ ಕಾರ್ಯಕ್ರಮವು ಶ್ರೀದಾಮ ಮಾಣಿಲದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕೃಷ್ಣಯ್ಯ ಕೆ ವಿಟ್ಲ ಅರಮನೆ, ಅಧ್ಯಕ್ಷ ಜಯರಾಮ ಆಳವ, ಕಾರ್ಯಾಧ್ಯಕ್ಷ ಪೂವಪ್ಪ ಗೌಡ, ಉದ್ಯಮಿ ಸುಬ್ರಾಯ ಪೈ, ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ ಕೆ ಸೇಸಪ್ಪ ಬೆದ್ರಕಾಡು, ರಾಜೇಶ್ ಆರ್ ಕೆ ಆಟ್ರ್ಸ್ ವಿಟ್ಲ, ಮೊಕ್ತೇಸರ ಸೀನ, ಹರೀಶ್ ಮೊದಲಾದವರು ಉಪಸ್ಥಿತರಿದ್ದರು.

