ಬಂಟ್ವಾಳ: ಸರಪಾಡಿಯಲ್ಲಿ ನೇತ್ರಾವತಿ ನದಿಗೆ ನಿರ್ಮಿಸಲಾದ ಎಂ ಆರ್ ಪಿ ಎಲ್ ಡ್ಯಾಂ ಗೆ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಯವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ನಗರ ನೀರು ಸರಬರಾಜು ಇಂಜಿನಿಯರ್ ಶೋಭಾಲಕ್ಷ್ಮಿ ,ಪುರಸಭಾ ಮುಖ್ಯಾಧಿಕಾರಿ ಮೆಬೆಲ್ ಡಿಸೋಜಾ,ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೊ ಸಹಿತ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಶಾಸಕರು ಚರ್ಚಿಸಿದರು.

ಡ್ಯಾಂನ ಮೇಲ್ಭಾಗದಲ್ಲಿ ಹೂಳು ತುಂಬಿದ್ದು ನೀರಿನ ಕೆಳ ಹರಿವಿಗೆ ತೊಂದರೆಯಾಗುತ್ತಿರುವ ಹಿನ್ನಲೆಯಲ್ಲಿ ಹೂಳು ತೆರವಿಗೆ ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಗೋವಿಂದ ಪ್ರಭು,ಮಾಜಿ ಸದಸ್ಯ ಬಿ.ದೇವದಾಸ ಶೆಟ್ಟಿ , ಗಣೇಶ್ ರೈ ಮಾಣಿ ಮತ್ತು ಎಂ.ಆರ್.ಪಿ.ಎಲ್ ಡ್ಯಾಂನ ಸಿಬ್ಬಂದಿಗಳು ಉಪಸ್ಥಿತರಿದ್ದರು.