ಶ್ರೀ ರಾಮಕೃಷ್ಣ ಮಿಷನ್ ಮಂಗಳೂರು ಇದರ ಸಹಕಾರದೊಂದಿಗೆ ವಿಠಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೆಲ್ತ್ ಕ್ಲಬ್ ನ ವತಿಯಿಂದ sಸ್ವಚ್ಛ ಮನಸ್ಸು ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಮಾರಿ ಚೈತ್ರಾ ಅವರು ಸ್ವಚ್ಛ ಪರಿಸರದ ಬಗ್ಗೆ ಪ್ರಾತ್ಯಕ್ಷಿಕೆಯನ್ನು ನೀಡಿದರು. ಕುಮಾರಿ ಅಖಿಲಾ ಅವರು ಸಹಕರಿಸಿದರು.
ವಿಠಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಉಪಪ್ರಾಂಶುಪಾಲೆ ಶಾಲಿನಿ ನೊಂಡಾ ವಿದ್ಯಾರ್ಥಿಗಳು ಸ್ವಚ್ಛತೆಯ ಕಡೆ ಗಮನ ಹರಿಸಬೇಕೆಂದು ತಿಳಿಸಿದರು. ಹೆಲ್ತ್ ಕ್ಲಬ್ ನ ಸಂಯೋಜಕಿ ಶ್ರೀಮತಿ ಝಕಿಯಾ ಹಾಗೂ ಇತರ ಸದಸ್ಯರು ಹಾಜರಿದ್ದರು. ವಿದ್ಯಾರ್ಥಿನಿಯರಾದ ಅಪೂರ್ವ ಭಟ್ , ಮನಸ್ವಿ, ಅನಘ್ರ್ಯ, ಶ್ರದ್ಧಾಲಕ್ಷ್ಮಿ ಪ್ರಾರ್ಥನೆ ಗೈದರು. ರಿಷಿಬಾ ಸ್ವಾಗತಿಸಿ ಅನುನಯಾ ವಂದಿಸಿದರು. ಅನನ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
