ಬಂಟ್ವಾಳ; ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್  ೧೯೬೩ ರಲ್ಲಿ ಸ್ಥಾಪನೆಯಾದ ಬಳಿಕ ಸೇವೆ ಸಲ್ಲಿಸಿದ ಅಧ್ಯಕ್ಷರುಗಳು ಭಾವಚಿತ್ರಗಳ ಅನಾವರಣ ಕಾರ್ಯಕ್ರಮ ನಡೆಯಿತು. ಬ್ಯಾಂಕಿನ ಮಾಜಿ ಆಧ್ಯಕ್ಷ, ಮಾಜಿ ಸಚಿವರಾದ ಬಿ.ರಮಾನಾಥ ರೈ ಅವರು ಭಾವಚಿತ್ರಗಳ ಅನಾವರಣಗೊಳಿಸಿ ಮಾತನಾಡಿ, ರಾಜ್ಯದ 177 ಪಿಎಲ್ ಡಿ ಬ್ಯಾಂಕ್ ಗಳಲ್ಲಿ ಉಭಯ ಜಿಲ್ಲೆಯ ಪಿಎಲ್ ಡಿ  ಬ್ಯಾಂಕ್ ಗಳು ಸಾಲ ವಸೂಲಾತಿಯಲ್ಲಿ ಉತ್ತಮ ಸಾಧನೆಗೈದಿರುವುದು ಅಭಿನಂದನೀಯವಾಗಿದೆ.
KAR_2454 (1)ರೈತರಿಗೆ ಸಕಾಲದಲ್ಲಿ ಸಾಲನೀಡಿ ಅವರ ಅಭಿವೃದ್ದಿಯಲ್ಲಿಯೂ ಬ್ಯಾಂಕ್ ಮಹತ್ತರವಾದ ಪಾತ್ರ ವಹಿಸಿರುವುದು ಶ್ಲಾಘನೀಯ ಎಂದರು.ಬಂಟ್ವಾಳ ಭೂ ಬ್ಯಾಂಕ್ ನಲ್ಲಿ ಅಧ್ಯಕ್ಷನಾಗಿದ್ದುಕೊಂಡು ರಾಜಕೀಯ ಜೀವನ ಆರಂಭಿಸಿರುವುದನ್ನು ಮೆಲುಕು ಹಾಕಿದ ರೈ ಅವರು ಪ್ರಸ್ತುತ ಬಂಟ್ವಾಳ ಬೂ ಬ್ಯಾಂಕ್ ಸಾಲ ವಸೂಲಾತಿಯಲ್ಲಿ ಜಿಲ್ಲೆಯಲ್ಲೆ ಉತ್ತಮ ಸಾಧನೆಮಾಡಿದ್ದು,ಇದಕ್ಕೆ ಶ್ರಮಿಸಿದ ಬ್ಯಾಂಕಿನ ಆಡಳಿತ ಮಂಡಳಿ,ಸಿಬಂದಿಗಳನ್ನು ಅಭಿನಂದಿಸಿದರು. ಬ್ಯಾಂಕಿನ ಅಧ್ಯಕ್ಷ ಪ್ರಸ್ತಾವಿಸಿ,ಸ್ವಾಗತಿಸಿದರು.ಉಪಾಧ್ಯಕ್ಷ ಸಂಜೀವ ಪೂಜಾರಿ,ಮಾಜಿ ಅಧ್ಯಕ್ಷರುಗಳಾದ ಜಿನರಾಜ ಆರಿಗವೆಂಕಪ್ಪ ಕಾಜವ,ನಿರ್ದೇಶಕರುಗಳಾದ ಮುರಳೀಧರ ಶೆಟ್ಟಿ,ಚಂದ್ರಶೇಖರ ಶೆಟ್ಟಿ,ಹೊನ್ನಪ್ಪ ನಾಯ್ಕ್,ಪರಮೇಶ್ವರ ಎಂ.ಚಮನದ್ರಹಾಸ ಕರ್ಕೇರ,ಸುಜಾತ,ಪುಪ್ಪಾವತಿ,ಕಸ್ಕಾಡ್೯ ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕ ಸುರೇಶ್,ಬ್ಯಾಂಕಿನ ವ್ಯವಸ್ಥಾಪಕ ಶೇಖರ ಎಂ.ವರ್ತಕರ ಬ್ಯಾಂಕಿನ ಅಧ್ಯಕ್ಷ ಸುಭಾಶ್ಚಂದ್ರ ಜೈನ್, ಪ್ರಕಾಶ್ ಬಿ.ಶೆಟ್ಟಿ,ಪದ್ಮನಾಭ ನರಿಂಗಾನ,ಪ್ರಶಾಂತ್ ಕಾಜವ ಮೊದಲಾದವರಿದ್ದರು.ಜಿಪಂ ಸದಸ್ಯ,ನಿರ್ದೇಶಕ ಚಂದ್ರಪ್ರಕಾಶ್ ಶೆಟ್ಟಿ ವಂದಿಸಿದರು.

 

By suddi9

Leave a Reply

Your email address will not be published. Required fields are marked *