ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿಗಳಿಗೆ ಜೇನು ಕೃಷಿ ಮಾಹಿತಿ ಕಾರ್ಯಗಾರವು ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು. ದೂರವಾಣಿ ಇಲಾಖೆಯ ಉದ್ಯೋಗಿ ,ಪ್ರಗತಿಪರ ಕೃಷಿಕರಾದ ರಾಕೋಡಿ ಈಶ್ವರ ಭಟ್ರವರು ಮಾತನಾಡಿ,ಚಲಿಸುವ ಚೌಕಟ್ಟಿನ ಪೆಟ್ಟಿಗೆಯಲ್ಲಿ ಸಾಕುವುದೇ ಜೇನು ಕೃಷಿ.
ಜೇನುನೊಣದಲ್ಲಿ ನಾಲ್ಕು ವಿಧಗಳಿದ್ದು,ತುಡುವೆ ನೊಣವನ್ನು ಮಾತ್ರ ಪೆಟ್ಟಿಗೆಯಲ್ಲಿ ಸಾಕುತ್ತಾರೆ. ಜೇನುನೊಣ ಪಕೃತಿಯಲ್ಲಿ ಬಹುಮುಖ್ಯವಾದ ಪಾತ್ರ ವಹಿಸುತ್ತದೆ ಎಂದರು. ಜೇನುನೊಣಗಳಿಲ್ಲದೆ ಪರಾಗಸ್ಪರ್ಶ ಸಾದ್ಯವಿಲ್ಲ, ಜೇನು ಸಂತತಿ ನಾಶ ಆದರೆ ಉತ್ಪಾದನೆ ಕಡಿಮೆಯಾಗಿ ಮನುಷ್ಯ ಸಂತತಿ ಕೂಡ ನಾಶ ಆಗುತ್ತದೆ ಹಾಗಾಗಿ ಜೇನು ಉಳಿಸುವುದು ನಮ್ಮ ಕರ್ತವ್ಯವೂ ಆಗಿದೆ ಎಂದು ವಿವರಿಸಿದರು.
4ನೇ ತರಗತಿಯ ಪರಿಸರ ಅಧ್ಯಯನ ವಿಷಯದ ಸವಿಜೇನು ಪಾಠಕ್ಕೆ ಸಂಬಂಧಿಸಿದಂತೆ ಜೇನು ಸಾಕಣೆ ಹೇಗೆ ಮಾಡುವುದು, ಯಾವ ಜೇನಿನಿಂದ ಜೇನು ಕೃಷಿ ಮಾಡುವುದು, ಅದರಿಂದಾಗುವ ಲಾಭ ಇತ್ಯಾದಿ ವಿಷಯದ ಕುರಿತಾದ ಮಾಹಿತಿಯನ್ನು ನೀಡಿದರು.
ವಿದ್ಯಾರ್ಥಿಗಳು ಜೇನು ಕೃಷಿಯ ಕುರಿತಾದ ತಮ್ಮ ಸಂಶಯಗಳನ್ನು ವ್ಯಕ್ತಪಡಿಸಿದರು.ವೇದಿಕೆಯಲ್ಲಿ ಶಾಲಾ ಮುಖ್ಯಗುರುಗಳಾದ ರವಿರಾಜ ಕಣಂತೂರು ಉಪಸ್ಥಿತರಿದ್ದರು. ಈ ಕಾರ್ಯಗಾರದಲ್ಲಿ ೪ನೇ ತರಗತಿಯ ೧೫೯ ವಿದ್ಯಾರ್ಥಿಗಳು, ಅಧ್ಯಾಪಕ ವೃಂದದವರು ಭಾಗವಹಿಸಿದ್ದರು. ಅಧ್ಯಾಪಕರಾದ ರೂಪಕಲಾ ಸ್ವಾಗತಿಸಿ, ಚೈತ್ರ ಎನ್ ಕೆ ವಂದಿಸಿದರು.
