ಅಮ್ಮುಂಜೆ: ಅಮ್ಮುಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ವಾರ್ಷಿಕ ಮಹಾಸಭೆಯು ಸೆ.23ರಂದು ಸೋಮವಾರ ಸಂಘದ ವಠಾರದಲ್ಲಿ ನಡೆಯಿತು.ಅಮ್ಮುಂಜೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ರಂಗನಾಥ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ 2018-19 ನೇ ಶಾಲಿನ ಸಭೆಯಲ್ಲಿ ಪಶು ವೈದ್ಯಾಧಿಕಾರಿ ಡಾ.ಚಂದ್ರಶೇಖರ ಭಟ್ ಗುಣಮಟ್ಟದ ಹಾಲಿನ ಬಗ್ಗೆ ಪಶುಗಳಿಗೆ ಗುಣಮಟ್ಟದ ಆಹಾರವನ್ನು ನೀಡುವ ಕುರಿತು ಸದಸ್ಯರಿಗೆ ಮನವರಿಕೆಮಾಡಿದರು.23-02

23-2ದ.ಕ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಸರೋಜಿನಿ ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಪರಿಶೀಲಿಸಿದರು .ಕಾರ್ಯದರ್ಶಿ ರಾಮ ಎಲ್ ಮೂಲ್ಯ ಸ್ವಾಗತಿಸಿ ವಂದಿಸಿದರು.ಸಭೆಯಲ್ಲಿ ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *