ಬಂಟ್ವಾಳ: ಕಾಲೇಜಿನ ಪ್ರಾಂಶುಪಾಲರಾದ ಶಶಿಕಲಾ ಕೆ ಗಾಂಧೀಜಿಯವರ ಭಾವಚಿತ್ರ ಕ್ಕೆ ಪುಷ್ಪನಮನ ಸಲ್ಲಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಅಹಿಂಸೆ, ಪ್ರಾಮಾಣಿಕತೆ, ಸರಳ ಜೀವನ ಮತ್ತು ಉದಾತ್ತ ಚಿಂತನೆ ಗಳಿಂದ ಮಾನವೀಯ ಮೌಲ್ಯ ಗಳನ್ನು ಗೌರವಿಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಗೊಂಡು ಗಾಂಧೀಜಿ ಹಾಗೂ ಶಾಸ್ರೀಜಿಯವರ ತತ್ವಾದರ್ಶಗಳನ್ನು ಜೀವನದುದ್ದಕ್ಕೂ ಅಳವಡಿಸಿಗೊಂಡು ಶ್ರೇಷ್ಟ ಭಾರತದ ನಿರ್ಮಾಣಕ್ಕೆ ಪಣತೊಡಬೇಕು ಎಂದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಾಲಕೃಷ್ಣ ಗೌಡ , ಉಪನ್ಯಾಸಕ- ಉಪನ್ಯಾಸಕೇತರರು ಹಾಗು ವಿದ್ಯಾರ್ಥಿಗಳು ಭಾಗವಹಿಸಿದ್ದರು.

