ಕಟೀಲು :ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದ ಆರು ಯಕ್ಷಗಾನ ಮೇಳಗಳ ತಿರುಗಾಟಕ್ಕೆ ನ.22 ರಂದು ಶುಕ್ರವಾರ ದೇವಳದಲ್ಲಿ ಚಾಲನೆ ನೀಡಲಾಯಿತು. ಕಟೀಲು ಶ್ರೀ ದೇವಿಯ ಸನ್ನಿಧಾನದಲ್ಲಿ ಕಲಾವಿದರಿಗೆ ದೇವಳದ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಗೆಜ್ಜೆಗಳನ್ನು ನೀಡುವ ಮೂಲಕ ಈ ವರ್ಷದ ತಿರುಗಾಟಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಟೀಲು ದೇವಳದ ಮೊಕ್ತೇಸರ ಕೊಡೆತ್ತೂರು ಗುತ್ತು ಸನತ್ ಕುಮಾರ್ ಶೆಟ್ಟಿ, ಮೊಕ್ತೇಸರ ವಾಸುದೇವ ಆಸ್ರಣ್ಣ ,ಆಸ್ರಣ್ಣರ ಬಂದುಗಳು, ತಂತ್ರಿಗಳು, ದೇವಳದ ಅರ್ಚಕರು, ಆರು ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಆರು ಮೇಳಗಳ ಮೆನೇಜರುಗಳು, ಕಲಾವಿದರು , ಭಕ್ತಾಧಿಗಳು ಉಪಸ್ಥಿತರಿದ್ದರು.








