ಬಂಟ್ವಾಳ: ತುಳುಕೂಟ ಬಂಟ್ವಾಳ ಆಶ್ರಯದಲ್ಲಿ ಬಿ.ಸಿ.ರೋಡಿನಲ್ಲಿ ಈಚೆಗೆ ನಡೆದ ತುಳು ಕಥೆ,ಕವನ ವಾಚನ ಸ್ಪರ್ಧೆಯ ವಿಜೇತರಿಗೆ ಭಾನುವಾರ ತುಳು ನೃತ್ಯ ಭಜನಾ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಬಹುಮಾನವನ್ನು ವಿತರಿಸಲಾಯಿತು.
ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ವಿಜೇತರಿಗೆ ಬಹುಮಾನ ವಿತರಿಸಿದರು. ತುಳುಕೂಟ ಅಧ್ಯಕ್ಷ ಸುದರ್ಶನ ಜೈನ್ , ನ್ಯಾಯವಾದಿ ಅಶ್ವನಿ ಕುಮಾರ್ ರೈ, ಉದ್ಯಮಿ ನಾಗೇಶ್ ಕುಲಾಲ್, ಕೋಶಾಧಿಕಾರಿ ಸುಭಾಶ್ಚಂದ್ರ, . ತುಳುಕೂಟ ಕಾರ್ಯದರ್ಶಿ ಎಚ್.ಕೆ.ನಯನಾಡು ,ಭಜನಾ ಸಮಿತಿ ಸಂಚಾಲಕ ಮಂಜು ವಿಟ್ಲ , ಗೋಪಾಲ ಅಂಚನ್ ,ಗಣೇಶ್ ನಾಯಕ್ ಉಪಸ್ಥಿತರಿದ್ದರು. ರಮೇಶ್ ನಾಯಕ್ ರಾಯಿ ಬಹುಮಾನಿತರ ಪಟ್ಟಿ ವಾಚಿಸಿದರು.
ವಿಜೇತರ ವಿವರ:
ತುಳು ಕಥಾ ಸ್ಪರ್ಧೆ: ರಿಷಿಕಾ ( ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು) ಪ್ರಥಮ, ಅನನ್ಯ (ಸರಕಾರಿ ಪ್ರೌಢಶಾಲೆ ಪಂಜಿಕಲ್ಲು) ದ್ವಿತೀಯ, ಸಮ್ಯಕ್ ಜೈನ್ ( ಎಸ್ ವಿ ಎಸ್ ಆಂಗ್ಲಮಾಧ್ಯಮ ಶಾಲೆ ವಿದ್ಯಾಗಿರಿ) ಮತ್ತು ಆಕೃತಿ ( ಸರಕಾರಿ ಪ್ರೌಢಶಾಲೆ ಬಿಳಿಯೂರು) ತೃತೀಯ ಬಹುಮಾನ ಪಡೆದಿದ್ದಾರೆ.
ತುಳು ಹಾಡು ಹೇಳುವ ಸ್ಪರ್ಧೆ:
ದೀಕ್ಷಿತ್ ( ಸರಕಾರಿ ಪ್ರೌಢಶಾಲೆ ಬೆಂಜನಪದವು) ಪ್ರಥಮ, ವೈಷ್ಣವಿ ( ಎಸ್ ಎಲ್ ಎನ್ ಪಿ ವಿದ್ಯಾಲಯ ಪಾಣೆಮಂಗಳೂರು) ದ್ವಿತೀಯ, ದಕ್ಷಾ ಜಿ. ( ಎಸ್ ವಿ ಎಸ್ ದೇವಳ ಆಂಗ್ಲಮಾಧ್ಯಮ ಶಾಲೆ ಬಂಟ್ವಾಳ) ತೃತೀಯ ಸ್ಥಾನ ಪಡೆದಿದ್ದಾರೆ .

