ಬಂಟ್ವಾಳ:ಬಂಟ್ವಾಳ ತಾಲೂಕು 20ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ದ.29,30 ರಂದು ನಡೆಯಲಿದೆ. ಕತೆ,ಕವನ ಸಂಕಲನ, ವಿಮರ್ಶಾಕೃತಿಗಳನ್ನು ಬಿಡುಗಡೆ ಮಾಡಲು ಉದ್ಘಾಟನಾ ಸಮಾರಂಭದಲ್ಲಿ ಅವಕಾಶವಿದೆ. ಆಸಕ್ತ ಲೇಖಕರು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಮೋಹನ್ ರಾವ್ ಅವರಿಗೆ ಮುಂಚಿತವಾಗಿ ತಿಳಿಸಬೇಕಾಗಿ ಪ್ರಕಟನೆಯಲ್ಲಿ ತಿಳಿಸಲಾಗಿದೆ.
