ಉಡುಪಿ:- ಫೆ.8 ರಂದು ಬಳ್ಳಾರಿ ಜಿಲ್ಲೆಯ ಲಿಂಗನಾಯಕನಹಳ್ಳಿಯ ಬಯಲು ರಂಗ ಮಂದಿರದಲ್ಲಿ ನಡೆಯುವ 11 ನೇ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ತರಬೇತುದಾರ,ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ರವರು “ಕರ್ನಾಟಕ ಯುವ ರತ್ನ” ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೋಯಿಲಿ,ಸಚಿವರಾದ ಶ್ರೀರಾಮುಲು,ಸೋಮಣ್ಣ ಭಾಗವಹಿಸಲಿರುವರು.


