ಶ್ರೀನಿವಾಸಪುರ: ತಾಲ್ಲೂಕಿನ ರಾಯಲ್ಪಾಡು ಸಮೀಪದ ಅಂತರ ರಾಜ್ಯ ಚೆಕ್ ಪೋಸ್ಟ್ಗೆ ಮಂಗಳವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ಕೊರೊನಾ ವೈರಾಣು ಹರಡುವುದನ್ನು ತಡೆಯುವುದು ಇಂದಿನ ಅಗತ್ಯವಾಗಿದೆ. ಚೆಕ್ ಪೋಸ್ಟ್ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ನಿಗದಿತ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲ್ಲೂಕಿನ ಹೊಸಹುಡ್ಯ ಹಾಗೂ ಶೆಟ್ಟಿಹಳ್ಳಿ ಚೆಕ್ ಪೋಸ್ಟ್ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ತಾಲ್ಲೂಕು ವೈದ್ಯಾಧಿಕಾರಿ ಡಾ. ಆರ್.ಸಿ.ವಿಜಯ, ಕ್ಷಯರೋಗ ತಜ್ಞ ಡಾ. ಜಯರಾಂ ಇದ್ದರು.
