ಬಂಟ್ವಾಳ: ತಾಲೂಕಿನ ವಿವಿಧ ಗ್ರಾಮಗಳ ಫಲಾನುಭವಿಗಳಿಗೆ 94ಸಿ ಮತ್ತು 94ಸಿಸಿಯಡಿ ಹಕ್ಕುಪತ್ರ ಹಾಗೂ ಪರಿಹಾರದ ಚೆಕ್ ನ್ನು ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಿ.ಸಿ.ರೋಡಿನಲ್ಲಿರುವ ತಮ್ಮ ಕಚೇರಿಯಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು,ಗ್ರಾಮ ಲೆಕ್ಕಾಧಿಕಾರಿಗಳು,ಗ್ರಾಮ ಸಹಾಯಕರು ಉಪಸ್ಥಿತರಿದ್ದರು.
