ಬಂಟ್ವಾಳ: ರೈತರ ಪರವಾಗಿದ್ದೇವೆ ಎಂದು ಅಧಿಕಾರ ಸ್ವೀಕರಿಸಿದ .ಎಸ್.ಯಡಿಯೂರಪ್ಪ ಅವರು ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಾಡಿರುವುದು ನಾಚಿಕೆಕೇಡಿನ ವಿಚಾರ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಹೇಳಿದರು.

30bhraitasangha

ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ಮಂಗಳವಾರ ಬಿ.ಸಿ.ರೋಡಿನ ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಭೂಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ, ಎಪಿಎಂಸಿ ಕಾಯ್ದೆ, ಬೀಜ ಕಾಯ್ದೆ ಹಾಗೂ ಅಗತ್ಯ ಸರಕುಗಳ ಕಾಯ್ದೆ ತಿದ್ದುಪಡಿಗಳು ರೈತರ ಮತ್ತು ಜನಸಾಮಾನ್ಯರ ಮೇಲೆ ಬರೆ ಎಳೆದಂತಾಗಿದೆ ಎಂದರು.   ಎರಡು ರೈತ ಸಂಘಗಳ ಸದಸ್ಯರು ಈ ಸಂದರ್ಭ ಉಪಸ್ಥಿತರಿದ್ದು, ರಾಜ್ಯ, ಕೇಂದ್ರದ ನಿರ್ಧಾರಗಳನ್ನು ಖಂಡಿಸಿದರು. ಪ್ರಮುಖರಾದ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡಿಸ್, ಕೆ.ಕೃಷ್ಣಪ್ಪ ಸಾಲ್ಯಾನ್, ಪ್ರೇಮನಾಥ ಶೆಟ್ಟಿ ಬಾಳ್ತಿಲ, ಅಲೆಕ್ಸ್ ರೋಡ್ರಿಗಸ್, ರಾಮಣ್ಣ ವಿಟ್ಲ, ಎಂ. ಸುಬ್ರಹ್ಮಣ್ಯ ಭಟ್, ಸುದೇಶ್ ಮಯ್ಯ, ಸತೀಶ್ ಚಂದ್ರ ರೈ ಕಡೇಶ್ವಾಲ್ಯ, ಸದಾನಂದ ಶೀತಲ್, ರೂಪನ್ ಪಿಂಟೊ, ಆಲ್ವಿನ್ ವಿ. ಲೋಬೊ, ವಿವಿಯನ್ ಪಿಂಟೊ ಸಹಿತ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದು ಹೋರಾಟಕ್ಕೆ ಬೆಂಬಲ ಸೂಚಿಸಿದರು.

By suddi9

Leave a Reply

Your email address will not be published. Required fields are marked *