ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಮೋನಪ್ಪ ದೇವಸ್ಯ ರವರು ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅವರನ್ನು ಭೇಟಿಯಾದರು.
ಈ ಸಂದರ್ಭ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ ಅಭಿನಂದಿಸಲಾಯಿತು.ಬಂಟ್ವಾಳ ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಚೌಟ, ಕಾರ್ಯಾಲಯ ಕಾರ್ಯದರ್ಶಿ ಗುರುದತ್ತ್ ನಾಯಕ್ ಬಂಟ್ವಾಳ, ಕಾರ್ತಿಕ್ ಬಲ್ಲಾಳ್ ಅಮ್ಮುಂಜೆ ರವರು ಉಪಸ್ಥಿತರಿದ್ದರು.
