ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರವು ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಜು. 26 ರಂದು ಒಂದು ವರ್ಷ ಪೂರೈಸುತ್ತಿರುವ ಈ ಸಂದರ್ಭದಲ್ಲಿ ಪ್ರತಿ ಮನೆ ಮನೆಗಳಿಗೂ ಸಾಧನೆಯ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಸಂಕಷ್ಟ ಸವಾಲುಗಳ ನಡುವೆ ಸಂವೇದನೆ.
*ಸ್ಪಂದನೆ ಸಾಧನೆ*
ಜನಹಿತದ ಕಾಳಜಿಯ ಸರಕಾರದ ಸಾಧನೆಯನ್ನು ಅರಿಯೋಣ ಮನೆಮನೆಗೆ ಸಾರೋಣ ಸಹಕಾರಿಗಳಾಗೋಣ ಅಭಿವೃದ್ಧಿಯೇ ಆಡಳಿತ ಮಂತ್ರ ಸಾಹಿತ್ಯ ಕರಪತ್ರವನ್ನು ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಈ ದಿನ ಬಂಟ್ವಾಳ ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಪಕ್ಷದ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ. ಕ್ಷೇತ್ರದ ಉಪಾಧ್ಯಕ್ಷ ಚಿದಾನಂದ ರೈ. ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ. ಗೋಳ್ತಮಜಲು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಯಶೋಧರ ಕರ್ಬೆಟ್ಟು. ಪ್ರಮುಖರಾದ ರಂಜಿತ್ ಮೈರ. ಜಿನರಾಜ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
