ಬಂಟ್ವಾಳ : ತೆಂಗು ಬೆಳೆಯ ಸಮಗ್ರ ಅಭಿವೃದ್ದಿಗೆ ಪೂರಕ ಸಹಾಯ ಧನ, ತೆಂಗಿನ ಕಾಯಿ, ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ಧ ಸಹಕಾರಿ ನಿಯಮಿತದಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಶುಕ್ರವಾರ ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ಧ ಸಹಕಾರಿ ನಿ. ಅಧ್ಯಕ್ಷ ರಾಜಾ ಬಂಟ್ವಾಳ್ ಅವರ ನೇತೃತ್ವದ ನಿಯೋಗ ಶಾಸಕರನ್ನು ಬಿ.ಸಿ.ರೋಡಿನಲ್ಲಿರುವ ಕಚೇರಿಯಲ್ಲಿ ಭೇಟಿಯಾಗಿ ಈ ಮನವಿ ಸಲ್ಲಿಸಿತು.ಈ ಸಂದರ್ಭ ನಿಯಮಿತದ ನಿರ್ದೇಶಕರಾದ ಪ್ರೇಮನಾಥ ಶೆಟ್ಟಿ ಅಂತರ, ಶರಣಪ್ಪ ಉಮರಗಿ, ನಾರಾಯಣ ಪೂಜಾರಿ ದರ್ಖಾಸು, ವಿಠಲ ಸಪಲ್ಯ ಬಂಗುಲೆ, ಸದಾಶಿವ ಬಂಗುಲೆ, ನಾಗೇಶ್ ಕಲ್ಯಾರ್, ಅಂಬಿಕಾ ಹರೀಶ್, ಮುಖ್ಯಾಕಾರ್ಯನಿರ್ವಹರ್ಣಾಕಾರಿ
