ಬಂಟ್ವಾಳ: ಬಿ.ಮೂಡ ಗ್ರಾಮದ   ಮೊಡಂಕಾಪು ಹಾಲು ಉತ್ಪಾದಕರ ಸಹಕಾರಿ  ಸಂಘ ದಿಂದ ನಗದು ಕಳ್ಳವುಗೈದಿದ್ದ ಆರೋಪಿಯನ್ನು ಬಂಟ್ವಾಳನಗರ ಠಾಣೆಯ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಬಿ.ಮೂಡಗ್ರಾಮದ ಪಲ್ಲಮಜಲು ನಿವಾಸಿ ಇಕ್ಕ ಯಾನೆ ಮಹಮ್ಮದ್ ಇಕ್ಬಾಲ್ (೫೧) ಬಂಧಿತ ಆರೋಪಿಯಾಗಿದ್ದಾನೆ.IMG-20200809-WA0033

ಈತನಿಂದ  ನಗದು  1100 ರೂ.,ತಲಾ ಒಂದು ಟಾರ್ಜ್‌, ಸ್ಕ್ರೂಡ್ರೈವರ್, ಕಬ್ಬಿಣದ ರಾಡ್‌.  ಎಕ್ಸೋ ಬ್ಲೆಡ್‌ . ಮೀನಿಗೆ ಹಾಕುವ ಗಾಳ,ನೈಲಾನ್‌ ಹಗ್ಗ ಹೊಂದಿದ್ದ ಬ್ಯಾಗ್‌ ನ್ನು ವಶಪಡಿಸಲಾಗಿದೆ. ಆ. 07 ರಂದು ಬಿ.ಮೂಡ ಗ್ರಾಮ ಬಂಟ್ವಾಳ ತಾಲೂಕುಎಂಬವರು ಮೊಂಡಕಾಪು ಹಾಲು ಉತ್ಪಾದಕರ ಸಹಕಾರಿ ಸಂಘ ದಲ್ಲಿ ಕಳವು ಕೃತ್ಯ ನಡೆದಿದ್ದು, ಈಬಗ್ಗೆ ಸಂಘದ ಕಾರ್ಯದರ್ಶಿ ರಾಜೀವಿ ಮಲ್ಲಿ ನೀಡಿದ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿತ್ತು.

ಶನಿವಾರ ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅಪರಾಧ ವಿಭಾಗದ ಎಸ್ ಐ  ಕಲೈಮಾರ್ ಮತ್ತವರ ಸಿಬ್ಬಂದಿಗಳು  ಗಸ್ತಿನಲ್ಲಿದ್ದಾಗ  ಅಮ್ಟಾಡಿ ಗ್ರಾಮದ ಗೋರೆಮಾರ್‌ ಬಳಿ ಜೋಸೆಫ್‌  ಕಟ್ಟಡ ಎದುರು ಬ್ಯಾಗ್ ಹಿಡಿದು ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವ  ಇಲಾಖಾ ಜೀಪನ್ನು ಕಂಡು ಮರೆಮಾಚಲು ಯತ್ನಿಸಿದ್ದನೆನ್ನಲಾಗಿದೆ. 15ದಿನದ ಹಿಂದೆ ಜೈಲಿನಿಂದ ಬಂದಿದ್ದ:

ಅನುಮಾನಗೊಂಡ ಪೊಲೀಸರು ತಕ್ಷಣ ಅತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಹೆಸರು ಇಕ್ಕ ಯಾನೆ ಮಹಮ್ಮದ್ ಇಕ್ಬಾಲ್ ಎಂದು ತಿಳಿಸಿದ್ದಾನೆ.ಮತ್ತಷ್ಟು ಅತನನ್ನು ತನಿಖೆಗೊಳಪಡಿಸಿದಾಗ 15 ದಿನಗಳ ಹಿಂದೆಯಷ್ಠೆ ಜೈಲಿನಿಂದ ಬಿಡುಗಡೆಯಾಗಿ ಹೊರಬಂದಿದ್ದು, ಊರಿನಲ್ಲಿ ಯಾವುದೇ ಕೆಲಸವಿಲ್ಲದ ಕಾರಣ ಮತ್ತೆ ಕಳವು ಮಾಡಿಕೊಂಡು ಮೀನು ಹಿಡಿಯಲು ಹೊರಟಿರುವುದಾಗಿ ತಿಳಿಸಿದ್ದಾನೆಯಲ್ಲದೆ ಒಂದು ದಿವಸದ ಹಿಂದೆ ಮೊಡಂಕಾಪು ಹಾಲು ಉತ್ಪಾದಕರ ಸಹಕಾರಿ  ಸಂಘದಿಂದ ನಗದು ಹಣವನ್ನು ಕಳವುಗೈದಿರುವುದನ್ನು ಬಾಯಿಬಿಟ್ಟಿದ್ದಾನೆ. ತಕ್ಷಣ ಈತನನ್ನು ಬಂಧಿಸಿ,ಕೈಯಲ್ಲಿದ್ದ ಬ್ಯಾಗ್ ಸಹಿತ ಸೊತ್ತನ್ನು ವಶಪಡಿಸಲಾಯಿತು.

  ಈ ಹಿಂದೆ ಬಂಟ್ವಾಳ ನಗರ ಠಾಣ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣವೊಂದರಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದಾನೆ. ಅಲ್ಲದೆ ಬಂಟ್ವಾಳ ಗ್ರಾಮಾಂತರ,ಮಂಗಳೂರು ಉತ್ತರ, ಮಂಗಳೂರು ಪೂರ್ವ ಪೊಲೀಸ್‌ ಠಾಣೆ ಹಾಗೂ ಉಡುಪಿ ಜಿಲ್ಲೆಯ ಉಡುಪಿ ನಗರ,ಮಲ್ಪೆ,ಹಿರಿಯಡ್ಕ,ಕಾರ್ಕಳ ನಗರ ಪೊಲೀಸ್‌ ಠಾಣೆಗಳಲ್ಲಿಯು ಆರೋಪಿ ಇಕ್ಕ ಯಾನೆ ಮಹಮ್ಮದ್ ಮೇಲೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.ಬಂಧಿತ ಇಕ್ಕನನ್ನು ರವಿವಾರ ಬಂಟ್ವಾಳ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ. ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಎಸ್ ಐ ಕಲೈಮಾರ್ ಜೊತೆ ಸಿಬ್ಬಂದಿಗಳಾದಸುರೇಶ ,ಲೋಕೇಶ  , ಉಸ್ಮಾನ ವಾಲಿಕಾರ ,ಶ್ರೀಕಾಂತ,ಬಸಪ್ಪ,ವಿವೇಕ,ಕುಮಾರ ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *