ಮಂಗಳೂರು: ದೇಶದ 74 ಸ್ವಾತಂತ್ರ್ಯೋತ್ಸವವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿನಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ಜಿಲ್ಲಾ ಪಂಚಾಯತಿನ ಮಾನ್ಯ ಉಪಾಧ್ಯಕ್ಷರಾದ ಶ್ರೀಮತಿ ಕಸ್ತೂರಿ ಪಂಜ ನೆರವೇರಿಸಿದರು. ಗಂಧಗಿ ಮುಕ್ತ ಭಾರತ್ ಅಭಿಯಾನದ ಅಂಗವಾಗಿ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.
ಪ್ರತಿಜ್ಞೆಯನ್ನು ಜಿಲ್ಲಾ ಪಂಚಾಯತಿನ ಉಪ ಕಾರ್ಯದರ್ಶಿ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿಯಾಗಿರುವ ಶ್ರೀ ಆನಂದ್ ಕುಮಾರ್. ಕೆ ಭೋಧಿಸಿದರು. ಜಿ. ಪಂ ನ ಮುಖ್ಯ ಯೋಜನಾಧಿಕಾರಿಗಳಾದ ಶ್ರೀಮತಿ ಸಂಧ್ಯಾ ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.


