ಕೈಕಂಬ: ಮಂಗಳೂರು ತಾಲೂಕಿನ ಪೆರರ್ಮಂಕಿ ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಕುಮಾರ್ ಪೆರ್ಮಂಕಿ (46) ಬುಧವಾರ ಬೆಳಗ್ಗೆ ಹೃದಯಘಾತದಿಂದ ನಗರದ ಆಸ್ಪತ್ರೆಯಲ್ಲಿ ನಿಧನಹೊಂದಿದರು. ಬೆಳಗ್ಗೆ ಎಂದಿನಂತೆ ಲವಲವಿಕೆಯಿಂದ ಇದ್ದ ವಸಂತ ಕುಮಾರ್ ಅವರಿಗೆ ತೀವೃ ತರದ ಎದೆನೋವು ಕಾಣಿಸಿಕೊಂಡ ಅವರನ್ನು ತಕ್ಷಣ ನಗರದ ಆಸ್ಪತ್ರಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಉಳಾಯಿಬೆಟ್ಟು ಫೆರ್ಮಂಕಿ ಗ್ರಾಮ ಪಂಚಾಯತಿಯಲ್ಲಿ ಹತ್ತು ವರ್ಷಗಳಿಂದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಅವರು ಫೆರ್ಮಂಕಿ ಬಿಲ್ಲವ ಸಂಘದಲ್ಲಿ ಹಾಗೂ ಭಾರತೀಯ ಜನತಾ ಪಕಕ್ಷದ ಸಕ್ರೀಯ ಕಾರ್ಯಕರ್ತನಾಗಿ ಸಮಾಜ ಸೇವಕನಾಗಿ, ಕೃಷಿಕರಾಗಿದ್ದರು.ಮೃತರು ಪತ್ನಿ ಒರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
