ಗುರುಪುರ : ಇತ್ತೀಚೆಗೆ ಸುರಿದ ಧಾರಾಕಾರ ಗಾಳಿ-ಮಳೆಗೆ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಮತ್ತು ಅಡ್ಡೂರು ಗ್ರಾಮಗಳಲ್ಲಿ ಸಂಭವಿಸಿದ ಮಳೆ ಹಾನಿ 16 ಕುಟುಂಬಗಳಿಗೆ ಗುರುಪುರ ಕೈಕಂಬದ ನಾಡಕಚೇರಿಯಲ್ಲಿ ಉಪ-ತಹಶೀಲ್ದಾರ್ ಶಿವಪ್ರಸಾದ್ ಸರ್ಕಾರದಿಂದ ಮಂಜೂರಾಗಿರುವ ಪರಿಹಾರ ಚೆಕ್ ವಿತರಿಸಿದರು.gur-sep-22-nadakacheri

ಮೂಳೂರಿನ 11 ಕುಟುಂಬ ಹಾಗೂ ಅಡ್ಡೂರಿನ 5 ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಲಾದ ಸಂದರ್ಭದಲ್ಲಿ ಜಿಪಂ ಸದಸ್ಯ ಯು ಪಿ ಇಬ್ರಾಹಿಂ, ತಾಪಂ ಸದಸ್ಯ ಸಚಿನ್ ಅಡಪ, ಗುರುಪುರ ಗ್ರಾಪಂ ಮಾಜಿ ಉಪಾಧ್ಯಕ್ಷ ಜಿ ಎಂ ಉದಯ ಭಟ್, ಸದಸ್ಯರಾದ ಕೆ ಸದಾಶಿವ ಶೆಟ್ಟಿ ಕೆ, ಹನೀಫ್ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *