ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಸಮುದಾಯವನ್ನು ಆತ್ಮನಿರ್ಭರ್ ಗೆ ಒಳಪಡಿಸುವ ನಿಟ್ಟಿನಲ್ಲಿ ಅಂದಾಜು ರೂ. 2000 ಕೋಟಿ ವೆಚ್ಚದಲ್ಲಿ ಕೇಂದ್ರ ಶಿಪ್ಪಿಂಗ್ ಮಂತ್ರಾಲಯದ ವತಿಯಿಂದ 23 ವಿವಿಧ ಯೋಜನೆಗಳು ಅನುಷ್ಠಾನಗೊಳ್ಳಲಿವೆ.nalin kumar

ಇವುಗಳಲ್ಲಿ ಮುಖ್ಯವಾಗಿ ನವ ಮಂಗಳೂರು ಬಂದರಿನಲ್ಲಿ ಗ್ಯಾಸ್ ಟರ್ಮಿನಲ್, ಎಲ್ ಎನ್ ಜಿ ಟೆರ್ಮಿನಲ್, ಪೆಟ್ರೋಕೆಮಿಕಲ್ಸ್ ಕಾಂಪ್ಲೆಕ್ಸ್, ಆಹಾರ ಧಾನ್ಯ ಗೋದಾಮು, ಸೀಫುಡ್ ಪಾರ್ಕ್, ವಾಟರ್ ಸ್ಪೋರ್ಟ್ ಜಟ್ಟಿಗಳ ನಿರ್ಮಾಣ, ಬಂದರು ಆಸ್ಪತ್ರೆ ನಿರ್ಮಾಣ ಹಾಗೂ ವಿವಿಧ ಬೀಚ್ ಗಳ ಅಭಿವೃದ್ಧಿ ಮುಂತಾದ ವಿವಿಧ ಯೋಜನೆಗಳು ಸೇರಿವೆ.

ಕೇಂದ್ರ ಶಿಪ್ಪಿಂಗ್ ರಾಜ್ಯ ಸಚಿವರಾದ ಶ್ರೀ ಮಾನ್ ಸುಖ್ ಮಾಂಡವೀಯ ಇವರು ಇಂದು ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಕರಾವಳಿ ಜಿಲ್ಲೆಗಳ ಸಂಸದರೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಈ ಮಾಹಿತಿಯನ್ನು ನೀಡಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ವಿವಿಧ ಯೋಜನೆಗಳನ್ನು ನೀಡಿರುವ ನೆಚ್ಚಿನ ಪ್ರಧಾನಿ ಶ್ರೀ ನರೇದ್ರ ಮೋದಿಜೀ, ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ ಹಾಗೂ ಶ್ರೀ ಮಾನ್ ಸುಖ್ ಮಾಂಡವೀಯ ಇವರಿಗೆ ದಕ್ಷಿಣ ಕನ್ನಡ ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ.

By suddi9

Leave a Reply

Your email address will not be published. Required fields are marked *