ಪೊಳಲಿ: ಕೊರೊನಾದಿಂದ ಗುಣಮಕ್ತರಾಗಿ ಪೊಳಲಿ ಕ್ಷೇತ್ರಕ್ಕೆ ಆಗಮಿಸಿದ ವಿಜಯಪುರ ನಗರ ಕ್ಷೇತ್ರ ಶಾಸಕ ಮಾಜಿ ಕೇಂದ್ರ ಸಚಿವ ಬಸವರಾಜ್ ಪಾಟೀಲ ಯತ್ನಾಳ ಅವರು ದ.ಕ ಕನ್ನಡ ಧಾರ್ಮಿಕ ಕ್ಷೇತ್ರಗಳಿಗೆ ಬೇಟಿ ನೀಡಿ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಸೆ.29ರಂದುಮಂಗಳವಾರ ಬೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ದೇವಳದ ಅರ್ಚಕ ಪದ್ಮನಾಭ ಭಟ್ ಪ್ರಸಾದ ನೀಡಿದರು.ದೇವಳದ ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ ಹಾಗೂ ವೆಂಕಟೇಶ್ ನಾವಡ, ಸಂಪತ್ ಕುಮಾರ್ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
