ಉಡುಪಿ: ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಇವರ ಆಯೋಜನೆಯಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ, 80 ಬಡಗುಬೆಟ್ಟು ಗ್ರಾಮದ ಪ್ರಗತಿಪರ ಕೃಷಿಕ ಕಬ್ಯಾಡಿ ಸತ್ಯನಾರಾಯಣ ಪ್ರಭು ಅವರನ್ನು ಸನ್ಮಾನಿಸುವ ಕಾರ್ಯಕ್ರಮವು ಅವರ ಕೃಷಿಭೂಮಿಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ್ ನಾಯಕ್, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸದಸ್ಯರಾದ ಕೆ.ಬಾಲಗಂಗಾಧರ ರಾವ್, ತಾರಾನಾಥ್ ಮೇಸ್ತ ಶಿರೂರು ಉಪಸ್ಥಿತರಿದ್ದರು.
