ಬಂಟ್ವಾಳ: ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ , ಬಜರಂಗದಳ ಪರಶುರಾಮ ಶಾಖೆ ಬಂಟ್ವಾಳ ನಗರದ ವತಿಯಿಂದ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಯವರ ಮೂಲಕ ಮುಖ್ಯಮಂತ್ರಿ ಬಿ. ಯಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ವಿಶ್ವಹಿಂದೂ ಪರಿಷತ್ ಪ್ರಮುಖರಾದ ಸರಪಾಡಿ ಅಶೋಕ್ ಶೆಟ್ಟಿ ಮತ್ತು ಬಜರಂಗದಳ ಜಿಲ್ಲಾ ಪ್ರಮುಖ ಗುರುರಾಜ್ ಬಂಟ್ವಾಳ್ ಅವರ ನೇತೃತ್ವದ ನಿಯೋಗ ಮುಖ್ಯಾಧಿಕಾರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.ಈ ಸಂದರ್ಭ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.
