ಬಂಟ್ವಾಳ:ಕನಕದಾಸರು ಕರ್ನಾಟಕದ ಸಂಗೀತದ ಕೀರ್ತನ ಸಾಹಿತ್ಯಕ್ಕೆ ಅಮೂಲ್ಯ ಕಾಣಿಕೆ ನೀಡಿದ್ದಾರೆ.ಭಕ್ತಿಯ ಮೂಲಕ ಭಗವಂತನನ್ನು ಒಲಿಸಿಕೊಳ್ಳಬಹುದೆಂಬುದಕ್ಕೆ ಸಾಕ್ಷಿಯಾಗಿದ್ದಾರೆ.

ದಾಸ ಪರಂಪರೆಯ ಶ್ರೇಷ್ಠ ದಾಸರಲ್ಲಿ ಕನಕದಾಸರು ಒಬ್ಬರುಎಂದು ಬಂಟ್ವಾಳ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಎ. ಅಣ್ಣು ನಾಯ್ಕ್ ಅವರು ಹೇಳಿದರು .

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಬಂಟ್ವಾಳ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಇಂದು ಗುರುವಾರ ಸರಳವಾಗಿ ನಡೆದ ಭಕ್ತ ಕನಕದಾಸರ ಜಯಂತಿ ಆಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ‌,ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಹಾಜರಿದ್ದರು.

ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.

By suddi9

Leave a Reply

Your email address will not be published. Required fields are marked *