ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ವತಿಯಿಂದ ‘ಅಟಲ್ ಬಿಹಾರಿ ವಾಜಪೇಯಿ’ ಯವರ ಜನ್ಮದಿನದ ಪ್ರಯುಕ್ತ ಕಲ್ಲಡಕ ಸುದೇಕಾರು ಶ್ರೀರಾಮ ಗೋಶಾಲೆಯ ಗೋವುಗಳ ಶುಚಿ ಹಟ್ಟಿ ಸ್ವಚ್ಛತೆ ಹಾಗೂ ಗೋ ಪೂಜಾ ಕಾರ್ಯಕ್ರಮವು ನೆರವೇರಿತು. 
ಈ ಸೇವಾ ಕಾರ್ಯಕ್ರಮದಲ್ಲಿ ಬಂಟ್ವಾಳ ಯುವಮೋರ್ಚಾ ಅಧ್ಯಕ್ಷರಾದ ಪ್ರದೀಪ್ ಅಜ್ಜಿಬೆಟ್ಟು ,ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ,ಬಂಟ್ವಾಳ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನೇಶ್ ದಂಬೆದಾರು,ಜಿಲ್ಲಾ ಕಾರ್ಯಕಾರಣಿ ಸದಸ್ಯರಾದ ಕಿಶೋರ್ ಪಲ್ಲಿಪ್ಪಾಡಿ , ಉಪಾಧ್ಯಕ್ಷರಾದ ಕಾರ್ತಿಕ್ ಬಲ್ಲಾಳ್ ,ಯತಿನ್ ಶೆಟ್ಟಿ , ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
