ಮೂಡುಬಿದರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಎಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ಶುಕ್ರವಾರ ರಕ್ತದಾನ ಶಿಬಿರ ನಡೆಯಿತು.
ಮಂಗಳೂರು ಕೆ.ಎಂ.ಸಿ ವೈಧ್ಯಾಧಿಕಾರಿ ಡಾ. ಸುಜಿತ್ ಚಕ್ರವತರ್ಿ, ಕೆ. ಎಮ್.ಸಿ ಶಿಬಿರ ಉದ್ಘಾಟಿಸಿದರು. ಶಿಬಿರದಲ್ಲಿ ಸಂಗ್ರಹಿಸಿರುವ ರಕ್ತವನ್ನು ಮೂರು ವಿಧಗಾಳಾಗಿ ವಿಂಗಡಿಸಿ ಮೂರು ತರದ ರೋಗಿಗಳಿಗೆ ನೀಡಲಾಗುವುದು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫೆನರ್ಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ಕೆ.ಎಮ್.ಸಿವೈಧ್ಯಾಧಿಕಾರಿ ಡಾ. ಮೋಹನ್ ದಾಸ್, ಆಳ್ವಾಸ್ ಸಂಸ್ಥೆ ಟ್ರಸ್ಟಿ ವಿವೇಕ್ ಆಳ್ವ, ಕಂಪ್ಯೂಟರ್ ಎಂಜಿನಿಯರಿಂಗ್ ವಿಭಾಗದ ಮುಖ್ಕಸ್ಥ ಪ್ರೊ. ಮಂಜುನಾಥ ಕೊಠಾರಿ ಉಪಸ್ಥಿತರಿದ್ದರು.
ರೆಡ್ ಕ್ರಾಸ್ ಸೊಸೈಟಿ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್ ವಿಭಾಗದ ಆಶ್ರಯದಲ್ಲಿ ನಡೆಸಲಾಯಿತು. ಆಳ್ವಾಸ್ ಸಂಸ್ಥೆಯ ವಿದ್ಯಾಥರ್ಿಗಳು ಮತ್ತು ಸಿಬ್ಬಂದಿಗಳು ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದರು. ರಕ್ತದಾನ ಶಿಬಿರದಲ್ಲಿ 513 ಯುನಿಟ್ ಗಳಷ್ಟು ರಕ್ತ ಸಂಗ್ರಹವಾಯಿತು.
