ಬಂಟ್ವಾಳ: ತಾಲೂಕಿನ ಕಾರಣಿಕದ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ನಟಿ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಇದೇ ಮೊದಲ ಬಾರಿ ಭೇಟಿ ನೀಡಿ ಕಲ್ಲುರ್ಟಿ ದರ್ಶನ ಪಡೆದರು.

ತಾರಾ ಅವರ ತಾಯಿ ಪುಷ್ಪಮ್ಮ, ಉದ್ಯಮಿ ವೆಂಕಟೇಶ್, ಶ್ರೀ ಆದಿಮಾಯೆ ಮಹಾಲಕ್ಮೀ ಮಂದಿರದ ಪಾತ್ರಿ ರಾಜೇಶ್, ಬೆಂಗಳೂರು ಉದ್ಯಮಿ ಗಣೇಶ್, ನಟ ಹರೀಶ್ ಆಚಾರ್ಯ, ಜೀವನ ರತನ್ ಉಪಸ್ಥಿತರಿದ್ದರು.
