ಪೊಳಲಿ : ಶ್ರೀ ರಾಜರಾಜೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ಜಾತ್ರೆಯ ನಿಮಿತ್ತ ಮಾ ೨೪ ರಂದು ಬುಧವಾರ ೧೦ನೇ ದಂಡಮಾಲೆಯ ದಿನದಂದು ತುಲಾಭಾರ ಸೇವೆ ನಡೆಯಿತು. ಹಲವಾರು ಭಕ್ತಾದಿಗಳು ಇದರಲ್ಲಿ ಪಾಲ್ಗೊಂಡಿದ್ದರು. 
ಭಕ್ತಾದಿಗಳು ಹರಕೆಯ ರೂಪದಲ್ಲಿ ಸಿಯಾಳ, ಅಕ್ಕಿ, ಬೆಲ್ಲ, ತೆಂಗಿನಕಾಯಿ, ಹೂವು, ಹಿಂಗಾರದಲ್ಲಿ ತುಲಾಭಾರ ಸೇವೆ ಸಲ್ಲಿಸಿದರು. ದೇವಳದ ಅರ್ಚಕರು ದೇವಿಗೆ ಹಾಕುವ ಚಿನ್ನಾಭರಣಗಳನ್ನು ಹರಕೆ ಹೊತ್ತ ಭಕ್ತರ ಕೊರಳಿಗೆ ಹಾಕಿ ತೂಕದಲ್ಲಿ ಕುಳ್ಳಿರಿಸಿ ತೂಕ ಮಾಡಿದರು. ದೇವಳದ ಅರ್ಚಕರು ಹಾಗೂ ಸಿಬ್ಬಂದಿಗಳು ಸೇವೆಗೆ ಸಹಕರಿಸಿದರು


