ವಿಟ್ಲ: ವಿಠಲ ವಿದ್ಯಾ ಸಂಘದ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ದಿ| ಸುಚೇತನ್ ಜೈನ್ ಇವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.
ಈ ಕಾರ್ಯಕರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ವಹಿಸಿದ್ದರು. ಸಂಘದ ಸಂಚಾಲಕ ಎಲ್ ಎನ್ ಕೂಡೂರು, ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯ ನಿತ್ಯಾನಂದ ನಾಯಕ್ ಮತ್ತು ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ವೇದಿಕೆಯಲ್ಲಿದ್ದರು.
ಡಾ| ವಿ ಕೆ ಹೆಗ್ಡೆ, ಹೇಮನಾಥ ಶೆಟ್ಟಿ, ರಶೀದ್ ವಿಟ್ಲ, ಪದ್ಮಯ್ಯ ಗೌಡ, ಶ್ರೀ ಕೃಷ್ಣ ಭಟ್, ಕಿರಣ್ ಕುಮಾರ್ ಬ್ರಹ್ಮಾವರ್ ಮತ್ತು ಅಣ್ಣಪ್ಪ ಸಾಸ್ತಾನ ನುಡಿನಮನ ಸಲ್ಲಿಸಿದರು. ಚಂದ್ರಕಾಂತ ಕಾರ್ಯಕ್ರಮ ಸಂಯೋಜಿಸಿದರು. ಆಡಳಿತ ಮಂಡಳಿಯವರು, ಉಪನ್ಯಾಸಕರು, ಸಿಬ್ಬಂಧಿಯವರು, ಹಿರಿಯ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
