ಕಲ್ಲಡ್ಕ: ವಿಶಾಖ ಪಟ್ಟಣದಲ್ಲಿ ಅ ೨೧ ಮತ್ತು ೨೨ರಂದು ನಡೆದ ರಾಷ್ಟ್ರೀಯ ಮಟ್ಟದ ಪ್ರಾಚೀನಯುದ್ಧ ವಿದ್ಯೆ ಸಿಲಂಬ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠ ಅವರು ಭಾಗವಹಿಸಿ ಡಬಲ್ ಸ್ಟಿಕ್ ಮತ್ತು ವಾಲ್ ವೀಚು ವಿಭಾಗದಲ್ಲಿ ೨ ಚಿನ್ನದ ಪದಕವನ್ನು ಪಡೆದು ರಾಜ್ಯಕ್ಕೆ ಕೀರ್ತಿ ತಂದಿರುತ್ತಾರೆ.WhatsApp Image 2021-10-27 at 15.09.04

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಹಿರಿಯ ವಿದ್ಯಾರ್ಥಿನಿಯಾಗಿದ್ದು, ಇಲ್ಲಿ ನಡೆಯುವ ವಿಶೇಷ ಕಾರ‍್ಯಕ್ರಮ ಕ್ರೀಡೋತ್ಸವದಲ್ಲಿ ಜೂಡೋ, ಕರಾಟೆ ಪ್ರದರ್ಶನದಲ್ಲಿ ಭಾಗವಹಿಸುತ್ತಿದ್ದರು. ಅಲ್ಲದೆ ಇಲ್ಲಿ ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲಿ ಜೂಡೋ ಸ್ಪರ್ಧೆಯಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿರುತ್ತಾರೆ. ವಿದ್ಯಾಕೇಂದ್ರದ ಹಿರಿಯರಾದ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್‌ ಕಲ್ಲಡ್ಕಇವರು ಶಾಲು ಹೊದಿಸಿ ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಅಧ್ಯಕ್ಷರಾದ ನಾರಾಯಣ ಸೋಮಯಾಜಿ, ಸಂಚಾಲಕರಾದ ವಸಂತ ಮಾಧವ, ಸಹಸಂಚಾಲಕರು, ಆಡಳಿತ ಮಂಡಳಿ ಸದಸ್ಯರು ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು ಉಪಸ್ಥಿತರಿದ್ದರು.WhatsApp Image 2021-10-27 at 15.09.05

By suddi9

Leave a Reply

Your email address will not be published. Required fields are marked *